ಇವನೆ ನೋಡು ಅನ್ನದಾತ
ಹೊಲದಿ ದುಡಿದೇ ದುಡಿವನು
ನಾಡ ಜನರು ಬದುಕಲೆಂದು
ದವಸ ಧಾನ್ಯ ಬೆಳೆವನು
ಮಳೆಯ ಗುಡುಗು ಚಳಿಯ ನಡುಗು
ಬಿಸಿಲ ಬೇಗೆ ಸಹಿಸುತ
ಬೆವರು ಸುರಿಸಿ ಕಷ್ಟ ಸಹಿಸಿ
ಒಂದೇ ಸವನೆ ದುಡಿಯುತ
ಗಟ್ಟಿ ದೇಹ ದೊಡ್ಡ ಮನಸು
ದೇವನಿಂದ ಪಡೆದನು
ಯೋಗಿಯಾಗಿ ತ್ಯಾಗಿಯಾಗಿ
ಅನ್ನ ನೀಡುತಿರುವನು
ಎತ್ತು ಎರಡು ಅವನ ಜೋಡು
ಕೂಡಿ ದುಡಿವ ಗೆಳೆಯರು
ಹಿಗ್ಗು ಕುಗ್ಗು ಏನೇ ಇರಲಿ
ಹೊಂದಿಕೊಂಡು ನಡೆವರು
ಕವಿ:- ಸತ್ಯಾರ್ಥಿ ಚನ್ನಬಸಪ್ಪ ಹೊಸಮನಿ
ಹೊಲದಿ ದುಡಿದೇ ದುಡಿವನು
ನಾಡ ಜನರು ಬದುಕಲೆಂದು
ದವಸ ಧಾನ್ಯ ಬೆಳೆವನು
ಮಳೆಯ ಗುಡುಗು ಚಳಿಯ ನಡುಗು
ಬಿಸಿಲ ಬೇಗೆ ಸಹಿಸುತ
ಬೆವರು ಸುರಿಸಿ ಕಷ್ಟ ಸಹಿಸಿ
ಒಂದೇ ಸವನೆ ದುಡಿಯುತ
ಗಟ್ಟಿ ದೇಹ ದೊಡ್ಡ ಮನಸು
ದೇವನಿಂದ ಪಡೆದನು
ಯೋಗಿಯಾಗಿ ತ್ಯಾಗಿಯಾಗಿ
ಅನ್ನ ನೀಡುತಿರುವನು
ಎತ್ತು ಎರಡು ಅವನ ಜೋಡು
ಕೂಡಿ ದುಡಿವ ಗೆಳೆಯರು
ಹಿಗ್ಗು ಕುಗ್ಗು ಏನೇ ಇರಲಿ
ಹೊಂದಿಕೊಂಡು ನಡೆವರು
ಕವಿ:- ಸತ್ಯಾರ್ಥಿ ಚನ್ನಬಸಪ್ಪ ಹೊಸಮನಿ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ